ಹೊಸದಿಗಂತ ವಿಜಯಪುರ:
ಮಹಾತ್ಮ ಗಾಂಧೀಜಿ ಕುರಿತು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಮೇ 11 ರಂದು ಮಹಾತ್ಮ ಗಾಂಧಿ ಪಾಕಿಸ್ತಾನದ ಪಿತಾಮಹ ಇದ್ದಂಗೆ ಎಂದು ಶಾಸಕ ಯತ್ನಾಳ್, ಮಹಾತ್ಮ ಗಾಂಧೀಜಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಅಲ್ಲಾಭಕ್ಷ ಬಡೇಗರ ಎಂಬುವರು ನೀಡಿದ ದೂರಿನ ಹಿನ್ನೆಲೆ, ಸಿಆರ್ ಪಿಸಿ ಕಲಂ 157 , 176 ಭಾರತೀಯ ನಾಗರಿಕ ಸುರಕ್ಷತೆ ಸಂಹಿತೆಯಡಿ ಪ್ರಕರಣ ದಾಖಲಾಗಿದೆ.