ರಾಜ್ಯದಲ್ಲಿ ಹೆಚ್ಚಾಗುತ್ತಿವೆ ಗೋಹಿಂಸೆ ಪ್ರಕರಣಗಳು: ರಾಜ್ಯ ಸರ್ಕಾರದಿಂದ ತನಿಖೆಗೆ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ ನೀಡಿದ್ದೇನೆಂದು ಹೇಳಿದರು.

ಈ ರೀತಿಯ ಮನಸ್ಥಿತಿ ಇರುವವರನ್ನು ಮೊದಲು ಗುರುತಿಸಬೇಕು. ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ? ಅಥವಾ ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲಾ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು.

ಇದೇ ವೇಳೆ ಸೆಂಟ್ರಲ್ ಜೈಲು ವಿಭಜನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವನ್ನು ವಿಭಾಗಿಸುವ ಯಾವುದೇ ಪ್ರಸ್ತಾವನೆಗಳು ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಆದರೆ, ರಾಜ್ಯದ ಎಲ್ಲಾ ಜೈಲುಗಳಲ್ಲಿ ನಡೆಯುತ್ತಿರುವ ನಿಯಮ ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಕಠಿಣ ಕ್ರಮ ಜರುಗಿಸಲಾಗುವುದು. ಬಹಳ ವರ್ಷಗಳಿಂದಲೂ ಬಂಧೀಖಾನೆ ಇಲಾಖೆಗೆ ನೇಮಕಾತಿಗಳು ನಡೆದಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಸಿಬ್ಬಂದಿಗಳ ನೇಮಕಾತಿಗೆ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿದೆ. ನೇಮಕಾತಿ ಬಳಿಕ ವ್ಯವಸ್ಥೆ ಸುಧಾರಣೆಯಾಗಲಿದೆ ಎಂದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!