ಜಾತಿ ಜನಗಣತಿ ಇದು ಕೇಂದ್ರ ಸರ್ಕಾರದ ಕ್ರಾಂತಿಕಾರಿ ನಿರ್ಧಾರ: ಸಿಎಂ ನಾಯ್ಡು ಶ್ಲಾಘನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು “ಕ್ರಾಂತಿಕಾರಿ” ಎಂದು ಕರೆದ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮುಂಬರುವ ವರ್ಷಗಳಲ್ಲಿ ಭಾರತ ಶ್ರೇಷ್ಠ ರಾಷ್ಟ್ರವಾಗುವ ಹಾದಿಯಲ್ಲಿದೆ ಎಂದು ಭವಿಷ್ಯ ನುಡಿದಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಮರಾವತಿಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ನಾಯ್ಡು, “ಪ್ರಧಾನಿ ಮೋದಿ ಜಾತಿ ಜನಗಣತಿಯನ್ನು ಪ್ರಾರಂಭಿಸುವ ಮೂಲಕ ಮತ್ತೊಂದು ಕ್ರಾಂತಿಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಡವರ ಮೇಲೆತ್ತಲು ಮತ್ತು ಉದ್ದೇಶಿತ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಇದು ಶ್ಲಾಘನೀಯ ಕ್ರಮವಾಗಿದೆ. ಭಾರತವು ಮುಂಬರುವ ವರ್ಷಗಳಲ್ಲಿ ಶ್ರೇಷ್ಠ ರಾಷ್ಟ್ರವಾಗುವ ಹಾದಿಯಲ್ಲಿದೆ” ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಮುಖ್ಯಮಂತ್ರಿ ನಾಯ್ಡು, ಈ ಕಠಿಣ ಸಮಯದಲ್ಲಿ ಆಂಧ್ರಪ್ರದೇಶ ಮತ್ತು ಇಡೀ ರಾಷ್ಟ್ರದ ಜನರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ “ನವ ಭಾರತ” ಹೊರಹೊಮ್ಮುತ್ತಿದೆ ಎಂದು ಹೇಳಿದ ನಾಯ್ಡು, ಜಾತಿ ಜನಗಣತಿಯು ಪ್ರಧಾನಿ ಮೋದಿ ಸರ್ಕಾರ ತೆಗೆದುಕೊಂಡ ಕ್ರಾಂತಿಕಾರಿ ನಿರ್ಧಾರವಾಗಿದೆ ಎಂದು ತಿಳಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!