July 21, 2026
Tuesday, July 21, 2026
spot_img

ಸಿದ್ದರಾಮಯ್ಯ ಹಠಕ್ಕೆ ಜಾತಿ ಗಣತಿ ನಡೀತಿದೆ ಅಷ್ಟೆ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರ ನಡೆಸುತ್ತಿರೋ ಜಾತಿ ಗಣತಿ ಹಳ್ಳ ಹಿಡಿಯುತ್ತಿದ್ದು, ಜನರಲ್ಲಿ ಅನುಮಾನ ಶುರುವಾಗಿದೆ. ಆದರೆ ಸಿದ್ದರಾಮಯ್ಯ ಹಠ ಹಿಡಿದು ಜಾತಿ ಸಮೀಕ್ಷೆ ಅವಧಿ ಮುಂದುವರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಿಸಿದ್ದಾರೆ.

ಗಣತಿಯ ದತ್ತಾಂಶ ಸಂಗ್ರಹ ಪ್ರಕ್ರಿಯೆ ಪಾರದರ್ಶಕವಾಗಿಲ್ಲ. ಬೆಂಗಳೂರಲ್ಲಿ ಈಗ ಸಮೀಕ್ಷೆ ಶುರುವಾಗಿದೆ, ಹೀಗಿದ್ದರೂ ಆಗಲೇ ಶೇ. 70 ಮುಗಿದಿದೆ ಎಂದು ಹೇಳ್ತಿದ್ದಾರೆ. ವಾಸ್ತವ ಏನೆಂದರೆ ಸೆಕ್ಯೂರಿಟಿಗಾರ್ಡ್‌ ಬಳಿ ಮಾಹಿತಿ ಪಡೆದು ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಅಂತಾ ನನ್ನ ಬಳಿ ಬಂದಿದ್ದ ಮಹಿಳೆಯರು ಹೇಳಿದ್ದಾರೆ.

ಗಣತಿಗೆ ಬರುವವರು ಕೇಳಿದ ಮಾಹಿತಿಗಳನ್ನೆಲ್ಲ ಕೊಟ್ಟರೆ ಗ್ಯಾರಂಟಿನೂ ಕಟ್, ರೇಷನ್ ಕಾರ್ಡ್ ಕೂಡ​ ಕಟ್ ಎಂದು ಅಶೋಕ್​ ಆರೋಪಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !