ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಗಣತಿ ವರದಿ ಕುರಿತು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರಕ್ಕೆ ಬಾರದೇ ಮುಕ್ತಾಯಗೊಂಡಿದೆ. ಹೀಗಾಗಿ ಈ ವರದಿ ಬಗ್ಗೆ ಯಾವುದೇ ಅಂತಿಮ ನಿರ್ಣಯ ಕೈಗೊಂಡಿಲ್ಲ.
ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ 2025ರ ದತ್ತಾಂಶ ಅಧ್ಯಯನ ವರದಿಯನ್ನು ಇವತ್ತು ರಾಜ್ಯ ಸಚಿವ ಸಂಪುಟ ಚರ್ಚಿಸಲಾಗಿದೆ. ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಇನ್ನೂ ಹೆಚ್ಚಿನ ಮಾಹಿತಿ ತಾಂತ್ರಿಕ ವಿವರಗಳು ಚರ್ಚೆಗೆ ಅವಶ್ಯ ಅಗತ್ಯ ಎಂದು ಅನಿಸಿದೆ. ಅವುಗಳನ್ನು ಒದಗಿಸಲು ಚರ್ಚೆ ಅಪೂರ್ಣವಾಗಿದೆ. ಸೌಹಾರ್ದವಾದ ವಾತಾವರಣದ ಚರ್ಚೆಯಲ್ಲಿ ಹಲವಾರು ವಿಷಯಗಳನ್ನು ಮಂಡಿಸಿದ್ದೇವೆ. ಜನಸಂಖ್ಯೆ ಹಿಂದುಳಿದಿರುವಿಕೆ ಏನೇನು ಪ್ಯಾರಾಮೀಟರ್ಸ್ ತೆಗೆದುಕೊಂಡಿದ್ದಾರೆ. ಸಮೀಕ್ಷೆ ಸಂದರ್ಭದಲ್ಲಿ ಏನೇನು ವಿವರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಚರ್ಚೆ ಮಾಡಲಾಗಿದೆ. ಈ ಬಗ್ಗೆ ಮೇ 2ರಂದು ನಡೆಯುವ ಸಂಪುಟ ಸಭೆಯಲ್ಲಿ ಇನ್ನಷ್ಟು ಚರ್ಚೆ ನಡೆಯಲಿದೆ ಎಂದರು.
ಕಳೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಿದ್ದ ಬೆನ್ನಲ್ಲೆ, ಪರ ವಿರೋಧ ಚರ್ಚೆ ಶುರುವಾಗಿತ್ತು. ಕ್ಯಾಬಿನೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮೊದಲು ಜಾತಿ ಗಣತಿ ವರದಿ ಸಂಬಂಧ ಸಚಿವರ ಬಳಿಕ ವೈಯಕ್ತಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ರು. ಈ ವೇಳೆ ದಲಿತ ಸಮುದಾಯದ ಸಚಿವರು, ಜಾತಿ ಗಣತಿ ನಮ್ಮ ಕಾಂಗ್ರೆಸ್ ಪಣಾಳಿಕೆಯಲ್ಲೇ ಇದೆ, ಅದು ನಮ್ಮ ಪಾಲಿಸಿ, ಜಾತಿಗಣತಿಯಿಂದ ಹಿಂದೆ ಸರಿಯೋದು ಬೇಡ ಎಂದು ಕೆಲ ಆಗ್ರಹಿಸಿದರು. ಆದ್ರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಿಂಗಾಯತ ಸಮುದಾಯದವ ಸಚಿವರು ಹಾಗೂ ಒಕ್ಕಲಿಗರ ಸಮುದಾಯದ ಸಚಿವರು ಏರು ಧ್ವನಿಯಲ್ಲಿ ವಿರೋಧಿಸಿದರು.
ಹೀಗೆ ಕ್ಯಾಬಿನೆಟ್ನಲ್ಲಿ ಯಾರೆಲ್ಲ ಜಾತಿ ಗಣತಿ ವರದಿ ಜಾರಿಗೆ ಆಕ್ಷೇಪ ಎತ್ತಿದ್ದರೋ ಅವರಿಗೆ ಲಿಖಿತ ರೂಪದಲ್ಲಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು. ಬಳಿಕ ಯಾವುದೇ ತೀರ್ಮಾನಕ್ಕೆ ಬಾರದೇ ಸಂಪುಟ ಸಭೆಯನ್ನ ಮುಕ್ತಾಯಗೊಳಿಸಲಾಯಿತು.
ಇನ್ನು ಮುಂದಿನವಾರ ಅಂದ್ರೆ ಏಪ್ರಿಲ್ 24 ರಂದು ಮಲೆಮಹದೇಶ್ವರ್ ಬೆಟ್ಟದಲ್ಲಿ ಕ್ಯಾಬಿನೆಟ್ ನಡೆಯಲಿದೆ. ಅಲ್ಲಿ ಸ್ಥಳೀಯ ಸಮಸ್ಯೆಗಳ ಚರ್ಚೆಯ ಅಜೆಂಡಾ ಸೆಟ್ ಆಗಿದೆ. ಹೀಗಾಗಿ ಮೇ 2 ರಂದು ಕ್ಯಾಬಿನೆಟ್ನಲ್ಲಿ ಜಾತಿ ಗಣತಿ ವರದಿ ವಿಚಾರ ಚರ್ಚೆಗೆ ಬರುವು ನಿರೀಕ್ಷೆ ಇದೆ.