ಜಾನುವಾರು ಕಳ್ಳಸಾಗಣೆ ಪ್ರಕರಣ: ಟಿಎಂಸಿ ನಾಯಕ ಅನುಬ್ರತಾ ಪುತ್ರಿ ಸುಕನ್ಯಾ​ಗೂ ಸಿಬಿಐ ಸಮನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕ ಅನುಬ್ರತಾ ಮಂಡಲ್ ಅವರ ಪುತ್ರಿ ಸುಕನ್ಯಾ ಮಂಡಲ್​ಗೂ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ಕೇಂದ್ರೀಯ ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ ಶುಕ್ರವಾರ ಬೆಳಗ್ಗೆ ಸುಕನ್ಯಾ ಮಂಡಲ್​ಗೆ ಸಮನ್ಸ್​​ ಕಳುಹಿಸಲಾಗಿದೆ. ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ನಿವಾಸದಲ್ಲೇ ಸುಕನ್ಯಾರನ್ನು ವಿಚಾರಣೆಗೂ ಒಳಪಡಿಸಿದ್ದರು.
ಸುಕನ್ಯಾ ಮಂಡಲ್ ಮತ್ತು ಆಕೆಯ ತಂದೆ ಅನುಬ್ರತಾ ಮಂಡಲ್​ ಹೆಸರಿನಲ್ಲಿ ನಡೆಸುತ್ತಿರುವ ವ್ಯವಹಾರಗಳ ಕುರಿತು ಸಿಬಿಐ ಹಲವು ದಾಖಲೆಗಳನ್ನು ಕೇಳಿದೆ.
ಇನ್ನು, ಟಿಎಂಸಿ ಪಕ್ಷದ ಪ್ರಭಾವಿ ನಾಯಕರಾದ ಅನುಬ್ರತಾ ಮಂಡಲ್ ಈಗಾಗಲೇ ಬಂಧನಕ್ಕೆ ಒಳಗಾಗಿದ್ದು, ಈ ಹಿಂದೆ ಆಪ್ತರಿಗೂ ಸಿಬಿಐ ಸಮನ್ಸ್​ ಜಾರಿ ಮಾಡಿತ್ತು. ಇದೀಗ ಪುತ್ರಿ ಸುಕನ್ಯಾ ಮಂಡಲ್​ಗೂ ಸಮನ್ಸ್ ಜಾರಿಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!