ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಜಾನುವಾರು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ಟಿಎಮ್ಸಿ ನಾಯಕ ಅನುಬೃತಾ ಮೊಂಡಾಲ್ ಅವರನ್ನು ದೆಹಲಿ ನ್ಯಾಯಾಲಯವು ಮಾ.10ರವರೆಗೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಕಳುಹಿಸಿದೆ.
ಮೊಡಾಲ್ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯನ್ನು ಮಧ್ಯ ರಾತ್ರಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ವಿಚಾರಣೆ ಅಗತ್ಯವಿದೆ ಎಂದು ತಿಳಿಸಿ ಇಡಿಗೆ ಒಪ್ಪಿಸಿದೆ.
ಬಂಧಿತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಮೊಂಡಲ್ ಅವರನ್ನು ಪಶ್ಚಿಮ ಬಂಗಾಳದ ಜೋಕಾ-ಇಎಸ್ಐ ಆಸ್ಪತ್ರೆಯ ವೈದ್ಯರು ನವದೆಹಲಿಗೆ ಪ್ರಯಾಣಿಸಲು ಯೋಗ್ಯರಾಗಿದ್ದಾರೆ ಎಂದು ತಿಳಿಸಿದ ನಂತರ ಇಡಿ ಅವರನ್ನು ಕಸ್ಟಡಿಗೆ ಪಡೆದುಕೊಂಡಿದೆ.