ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ( CWRC) ಆದೇಶ ನೀಡಿದೆ.
ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ ನವೆಂಬರ್ 23 ರಿಂದ ಡಿ.23 ರ ವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಸಿಡಬ್ಲ್ಯುಆರ್ಸಿ (CWRC) ಸೂಚನೆ ನೀಡಿದೆ.
ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಆದೇಶಿಸಿದೆ.
ಇತ್ತೀಚೆಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿತ್ತು, ಅವಧಿ ಮುಗಿಯುತ್ತಿದ್ದ ಹಿನ್ನೆಲೆ ಇಂದು ಸಭೆಯನ್ನು ನಡೆಸಲಾಗಿತ್ತು. ಇದೀಗ ಮತ್ತೆ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ನಿರ್ದೇಶನ ನೀಡಿದೆ.