ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಈ ಬಾರಿ ಸರಿಯಾಗಿ ಮಳೆಯಾಗಿಲ್ಲ. ಈ ನಡುವೆ ಕಾವೇರಿ (Cauvery) ನೀರನ್ನು ತಮಿಳುನಾಡಿಗೆ ಬಿಡಲಾಗುತ್ತಿದೆ. ಇದು ‘ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ಮಾಡುತ್ತಿರುವ ಕೆಲಸ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (BS Yadiyurappa) ಅವರು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ನೀರಿಲ್ಲ, ಮೇವಿಲ್ಲ, ಜನರು ಕಷ್ಟದಲ್ಲಿ ಇದ್ದಾರೆ. ಕಾವೇರಿ ನೀರಿನ ವಿಚಾರದಲ್ಲೂ ಸರ್ಕಾರ ರಾಜಕೀಯ ಮಾಡುತ್ತಿದೆ. ಈ ಹಿನ್ನಲೆ ಇಂಡಿಯಾ ಮೈತ್ರಿಕೂಟ ಬಲಪಡಿಸಲು ಸರ್ಕಾರ ನೀರು ಹರಿಸುತ್ತಿದೆ. ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ಕಾರ ವಿಫಲವಾಗಿದೆ. ಇನ್ನಾದರೂ ಸುಪ್ರೀಂಕೋರ್ಟ್ಗೆ ಸರ್ಕಾರ ಮನವರಿಕೆ ಮಾಡಲಿ, ರಾಜ್ಯ ಕಾಂಗ್ರೆಸ್ ಸರ್ಕಾರ ಪರೋಕ್ಷವಾಗಿ ಡಿಎಂಕೆಗೆ ಸಹಕರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.