ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತಾಗಿ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಆಗಸ್ಟ್ 28 ರಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ತಮಿಳುನಾಡು 24,000 ಕ್ಯೂಸೆಕ್ ಬಿಡುಗಡೆಗೆ ಒತ್ತಡ ಹೇರಿತ್ತು. ಆದರೆ ಕರ್ನಾಟಕ ತಮಿಳುನಾಡಿಗೆ ನೀರು ಬಿಡುವುದನ್ನು ತೀವ್ರವಾಗಿ ವಿರೋಧಿಸಿತು. ಅದರ ವಿರುದ್ಧವಾಗಿ ಸುಪ್ರೀಕೋರ್ಟ್ಗೆ ಅರ್ಜಿಯನ್ನು ತಮಿಳುನಾಡು ಸರ್ಕಾರ ಸಲ್ಲಿಸಿದೆ.
ಅಂದಿನ ಸಭೆಯಲ್ಲಿ ನಿತ್ಯವೂ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕ್ಕೆ ಸೂಚನೆ ನೀಡಲಾಗಿತ್ತು. ಅದರಂತೆ, ಕಾವೇರಿ ನೀರನ್ನು ಹರಿಬಿಡಲಾಗುತ್ತಿದೆ. ಆದರೆ, ಇದು ಮೈಸೂರು ಹಾಗೂ ಮಂಡ್ಯ ರೈತರ ನಿದ್ದೆಗೆಡಿಸಿದ್ದು, ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಇಂದು ಸುಪ್ರಿಂಕೋರ್ಟ್ನಲ್ಲಿ ಕಾವೇರಿ ನೀರು ವಿಚಾರಣೆ ಇರುವ ಹಿನ್ನೆಲೆಯಲ್ಲಿ ನಿನ್ನೆ ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯದ ವಕೀಲರು ಹಾಗೂ ಇಂಜಿನಿಯರ್ಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸುಪ್ರಿಂಕೋರ್ಟ್ನಲ್ಲಿ ಕರ್ನಾಟಕದ ಪರವಾಗಿ ವಾದ ಮಂಡಿಸುವಂತೆ ಡಿಕೆ ಶಿವಕುಮಾರ್ ಕರ್ನಾಟಕ ಪರ ವಕೀಲರಿಗೆ ಸೂಚಿಸಿದರು.