ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ವಿಚಾರ ಸುಪ್ರೀಂ ಕೋರ್ಟ್ ನಲ್ಲಿ ನಾಳೆ (ಸೆಪ್ಟೆಂಬರ್ 1) ವಿಚಾರಣೆ ನಡೆಯಲಿದೆ.
ಆಗಸ್ಟ್ 28 ರಂದು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ತಮಿಳುನಾಡು 24,000 ಕ್ಯೂಸೆಕ್ ಬಿಡುಗಡೆಗೆ ಒತ್ತಡ ಹೇರಿತ್ತು. ಕರ್ನಾಟಕ ತಮಿಳುನಾಡಿಗೆ ನೀರನ್ನು ಬಿಡುವುದನ್ನು ತೀವ್ರವಾಗಿ ವಿರೋಧಿಸಿತು. ಅದರ ವಿರುದ್ಧ ಸುಪ್ರೀಕೋರ್ಟ್ಗೆ ಅರ್ಜಿಯನ್ನು ತಮಿಳುನಾಡು ಸರ್ಕಾರ ಸಲ್ಲಿಸಿದೆ.
ಆ. 28ರಂದು ನಡೆದಿದ್ದ ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ನಿತ್ಯವೂ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕ್ಕೆ ಸೂಚನೆ ನೀಡಲಾಗಿತ್ತು. ಅದರಂತೆ, ಕಾವೇರಿ ನೀರನ್ನು ಹರಿಬಿಡಲಾಗುತ್ತಿದೆ. ಆದರೆ, ಇದು ಮೈಸೂರು ಹಾಗೂ ಮಂಡ್ಯ ರೈತರ ನಿದ್ದೆಗೆಡಿಸಿದ್ದು, ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಳೆ ಸುಪ್ರಿಂಕೋರ್ಟ್ನಲ್ಲಿ ಕಾವೇರಿ ವಿಚಾರಣೆ ಹಿನ್ನೆಲೆ ಇಂದು ದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜ್ಯದ ವಕೀಲರು ಹಾಗೂ ಇಂಜಿನಿಯರ್ಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸುಪ್ರಿಂಕೋರ್ಟ್ನಲ್ಲಿ ಕರ್ನಾಟಕ ಸಮರ್ಥ ವಾದ ಮಂಡಿಸುವಂತೆ ಡಿಕೆ ಶಿವಕುಮಾರ್ ಕರ್ನಾಟಕ ಪರ ವಕೀಲರಿಗೆ ಸೂಚನೆ ನೀಡಿದ್ದಾರೆ.