ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಇನ್ನೆರಡು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ನೀಡಿದೆ.
ಸಿಸೋಡಿಯಾ ವಿಚಾರಣೆಗೆ ಸಹಕಾರ ನೀಡದ ಕಾರಣ ಇನ್ನೆರಡು ದಿನ ಅವರ ಕಸ್ಟಡಿಯನ್ನು ವಿಸ್ತರಣೆ ಮಾಡಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದು, ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ನೀಡಿದೆ.
ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯನ್ನು ಮಾರ್ಚ್ ೧೦ರಂದು ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.