ಕದನ ವಿರಾಮ ಘೋಷಣೆ | ಯಾವುದೇ ಕಾರಣಕ್ಕೂ ಪಾಕಿಸ್ತಾನಕ್ಕೆ ಸಿಂಧೂ ನದಿ ನೀರು ಬಿಡುವುದಿಲ್ಲ: ಭಾರತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಈಗ ಕದನ ವಿರಾಮ ಘೋಷಣೆಯನ್ನು ಮಾಡಿದೆ.

ಇದೇ ವೇಳೆ ಕದನ ವಿರಾಮಕ್ಕೆ ಯಾವುದೇ ಷರತ್ತುಗಳಿಲ್ಲ ಎಂದು ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದ್ದು, ಕದನ ವಿರಾಮಕ್ಕೆ ಪೂರ್ವ ಅಥವಾ ನಂತರದ ಯಾವುದೇ ಷರತ್ತುಗಳಿಲ್ಲ. ಬದಲಿಗೆ ಪಾಕಿಸ್ತಾನದಿಂದಲೇ ಈ ಕದನ ವಿರಾಮಕ್ಕೆ ಕರೆ ಬಂದಿದೆ ಎಂದು ಹೇಳಿದೆ.

ಏತನ್ಮಧ್ಯೆ ಸೇನಾ ಸಂಘರ್ಷಕ್ಕೂ ಮುನ್ನ ಅಂದರೆ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಘೋಷಿಸಿದ್ದ ಸಿಂಧೂ ಜಲ ಒಪ್ಪಂದ ಅಮಾನತು ಮುಂದುವರೆಯಲಿದೆ ಎಂದೂ ಎಂಇಎ ಸ್ಪಷ್ಟಪಡಿಸಿದೆ.

ಈಗಾಗಲೇ ಸಿಂಧೂ ನದಿ ಪಾಕ್​​ಗೆ ಹೋಗದಂತೆ (Indus water) ಬಂದ್​​​ ಮಾಡಲಾಗಿದೆ. ಅದನ್ನು ಯಾವುದೇ ಕಾರಣಕ್ಕೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!