ಈ ಬಾರಿ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಜನತೆಗೆ ಜಿ.ಪರಮೇಶ್ವರ್ ಕಿವಿಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೊಸ ವರ್ಷಕ್ಕೆ ಕ್ಷಣಗಣನೆ ಶುರುವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಇದೇ ವೇಳೆ ಗೃಹ ಸಚಿವ ಜೆ.ಪರಮೇಶ್ವರ್ ಮಾತನಾಡಿ, ಹೊಸ ವರ್ಷವನ್ನು ಅತ್ಯಂತ ಎಚ್ಚರಿಕೆಯಿಂದ ಆಚರಿಸಿ ಎಂದು ಸಂದೇಶ ನೀಡಿದ್ದಾರೆ.

ಹೊಸ ವರ್ಷವನ್ನು ಬಹಳ ಎಚ್ಚರಿಕೆಯಿಂದ ಆಚರಿಸಬೇಕು ಎಂದು ಗೃಹ ಸಚಿವರು ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಬೆಂಗಳೂರು ಮಾತ್ರವಲ್ಲದೆ ಹೊರವಲಯದಲ್ಲೂ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಸುಮಾರು 10 ಲಕ್ಷ ಜನರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆಯಿದೆ. ಆದುದರಿಂದ ಹೊಸ ವರ್ಷವನ್ನು ಎಲ್ಲರೂ ಎಚ್ಚರಿಕೆಯಿಂದ ಆಚರಿಸಬೇಕು. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಬಾರ್‌ಗಳು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿರುತ್ತವೆ. ನಗರದಾದ್ಯಂತ ಪೊಲೀಸ್ ಭದ್ರತಾ ಕ್ರಮಗಳನ್ನು ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!