ಹೊಸದಿಗಂತ ಡಿಜಿಟಲ್ ಡೆಸ್ಕ್
ಕುಂದಾ ಮಹಾನಗರಿ ಬೆಳಗಾವಿಯಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ.
ಸೋಮವಾರ ರಾತ್ರಿ ಮಹಾನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.
ಮಂಗಳವಾರ ಮುಂಜಾನೆಯಿಂದಲೇ ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳ ಕನ್ನಡಾಭಿಮಾನಿಗಳು ಬೆಳಗಾವಿಯತ್ತ ಆಗಮಿಸುತ್ತಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ