ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಹೆಮ್ಮೆಯಾದ ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ವಿಧಿ ವಿಧಾನದಲ್ಲಿ ಆಯುಧ ಪೂಜೆ ನೆರವೇರುತ್ತಿದ್ದು, ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪೂಜಾ ವಿಧಾನಗಳನ್ನು ನಡೆಸುತ್ತಿದ್ದಾರೆ.
ಬೆಳಗ್ಗೆಯಿಂದಲೇ ಚಂಡಿ ಹೋಮ ಹಾಗೂ ಇನ್ನಿತರೆ ಪೂಜಾ ವಿಧಾನಗಳು ಆರಂಭವಾಗಿದೆ. ಆನೆ ಬಾಗಿಲಿಗೆ ಪಟ್ಟದ ಆನೆ, ಕುದುರೆ, ಹಸುಗಳು ಬಂದಿವೆ. ಆಯುಧ ಪಲ್ಲಕ್ಕಿಯನ್ನು ರಾಜವಂಶಸ್ಥರು, ಅರಮನೆ ಸಿಬ್ಬಂದಿ ನೇತೃತ್ವದಲ್ಲ ತರಲಾಗಿದೆ. ಕೋಡಿಸೋಮೇಶ್ವರ ದೇಗುಲದಲ್ಲಿ ಪಾರಂಪರಿಕ ಆಯುಧಗಳಿಗೆ ಅಲಂಕಾರ ಮಾಡಿ ಪೂಜಿಸಲಾಗಿದೆ. ರಾಜ ಪುರೋಹಿತರು ಪೂಜೆ ನೆರವೇರಿಸಿದ್ದಾರೆ.
ಇಂದು ಖಾಸಗಿ ದರ್ಬಾರ್ನ ಕೊನೆಯ ದಿನ, ದಿನದ ಕೊನೆಯಲ್ಲಿ ದರ್ಬಾರ್ ನಂತರ ಸಿಂಹಾಸನದ ಸಿಂಹ ವಿಸರ್ಜಿಸಲಾಗುವುದು. ರಾತ್ರಿ ದೇವರ ಮನೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಕಂಕಣ ವಿಸರ್ಜನೆ ಮಾಡಲಿದ್ದಾರೆ.