ಆರ್.ಎನ್. ನಾಯಕ ಕೊಲೆ ಪ್ರಕರಣ | ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ 9 ಆರೋಪಿಗಳು ದೋಷಿ: ಕೋರ್ಟ್ ತೀರ್ಪು

ಹೊಸದಿಗಂತ ವರದಿ, ಬೆಳಗಾವಿ:

ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಖ್ಯಾತ ಉದ್ಯಮಿ ಆರ್.ಎನ್. ನಾಯಕ ಕೊಲೆ ಪ್ರಕರಣ ಸಂಬಂಧ ಇಲ್ಲಿನ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿ, ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ, ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.
ಆರ್.ಎನ್.ನಾಯಕ್ ಕೊಲೆ ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. 6 ಆರೋಪಿ ಕೇರಳದ ರಬ್ದಿನ್ ಫಿಚೈ, 11 ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16 ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ‌ನಾಯಕ ಈ ಪ್ರಕರಣದಲ್ಲಿ ದೋಷಮುಕ್ತರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!