ಕೇಂದ್ರ ಸರ್ಕಾರವು ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್‌ ಮುಗಿಸುವ ಹುನ್ನಾರ ಮಾಡುತ್ತಿದೆ: ಡಿಕೆಶಿ

ಹೊಸದಿಗಂತ ವರದಿ ಹುಬ್ಬಳ್ಳಿ:
ಕೇಂದ್ರ ಸರ್ಕಾರವು ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ, ಧಾರವಾಡ ಜಿಲ್ಲಾ ಕಾಂಗ್ರೆಸ್ ಹುಬ್ಬಳ್ಳಿಯಲ್ಲಿ ಶುಕ್ರವಾರ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ಅವರು ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚನ್ನಮ್ಮ ವೃತ್ತದವರೆಗೆ ನಡೆಯಲಿರುವ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ “ಇಡಿ, ಆದಾಯ ತೆರಿಗೆ ಇಲಾಖೆಗಳನ್ನು ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ‌. ಹಾಲು, ಮೊಸರು ಇನ್ನಿತರ ಅಗತ್ಯ ವಸ್ತುಗಳ ಮೇಲೆ ತೆರೆಗೆ ಹಾಕಿದ್ದಾರೆ. ಇದರಿಂದ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ. ನ್ಯಾಶನಲ್ ಹೆರಾಲ್ಡ್ ಒಂದು ಸಂಸ್ಥೆಯಾಗಿದೆ. ಸೋನಿಯಾ ಮತ್ತು ರಾಹುಲ್ ಗಾಂಧಿಯವರನ್ನು ಜೈಲಿಗೆ ಹಾಕಿ ಕೇಂದ್ರ ಸರ್ಕಾರವು ಕಾಂಗ್ರೆಸ್ ಮುಗಿಸುವ ಹುನ್ನಾರ ನಡೆಸಿದೆ” ಎಂದರು‌.

ಬ್ರಿಟಿಷ್ ಆಡಳಿತಕ್ಕೆ ಹೆದರದ ಭಾರತೀಯರು ಬಿಜೆಪಿ ಬೆದರಿಕೆ ಹೆದುರುವುದಿಲ್ಲ. ಪೊಲೀಸ್ ಇಲಾಖೆಯಲ್ಲಿ ಲಂಚ ನಡೆಯುತ್ತಿದೆ. ಗೃಹ ಸಚಿವರು, ಸಚಿವರು ಉತ್ತರ ಪತ್ರಿಕೆ‌ ತಿದ್ದುವ ಪ್ರಯತ್ನ ಮಾಡುತ್ತಾರೆ. 40 ರಷ್ಟು ಲಂಚದ ಸರ್ಕಾರವಾಗಿದೆ. ಮತ್ತೆ ಸರ್ಕಾರ ಬರುತ್ತದೆ. ಆರೋಪಿಗಳಿಗೆ ಶಿಕ್ಷೆ ನೀಡುವ ಕೆಲಸ ಮಾಡಲಾಗುತ್ತದೆ. ಲಕ್ಷ ಜನರು ಖಾದಿ ಧ್ವಜವನ್ನು ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯ ಮಹೋತ್ಸವ ಮಾಡಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!