ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಅಸ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಸರ್ಕಾರದ ಸಭೆಯಲ್ಲಿ ಸ್ಮಾರಕಕ್ಕೆ ಸ್ಥಳ ಮಂಜೂರು ಮಾಡಲು ನಿರ್ಧರಿಸಲಾಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ.

ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಸಿಂಗ್ ಅವರ ನಿಧನವನ್ನು ಸ್ಮರಿಸಲಾಯಿತು. ಇದೇ ಸಭೆಯಲ್ಲಿ ದೆಹಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳ ಹುಡುಕಲು ನಿರ್ಧರಿಸಲಾಯಿತು.

ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ಕಾರಕ್ಕೆ ಪತ್ರ ಬರೆದು ಸ್ಮಾರಕಕ್ಕೆ ಜಾಗ ಮಂಜೂರು ಮಾಡುವಂತೆ ಮನವಿ ಮಾಡಿದರು. ಕೇಂದ್ರ ಸರ್ಕಾರ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಸ್ಮಾರಕ ರಚನೆಗೆ ಅನುಮೋದನೆ ನೀಡಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!