ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬಜೆಟ್ ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಮಂಡಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೃಷಿ ಕ್ಷೇತ್ರವನ್ನು ಬಜೆಟ್ ನಲ್ಲಿ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. 2022-23ರ ಬಜೆಟ್ ಗೆ ಹೋಲಿಸಿದರೆ ಈ ಬಜೆಟ್ ನಲ್ಲಿ ಕೃಷಿಕ್ಷೇತ್ರಕ್ಕೆ ರೂ.8.468.21 ಕೋಟಿಯಷ್ಟು ಹಣ ಕಡಿಮೆ ನೀಡಲಾಗಿದೆ. ಕೇಂದ್ರ ಬಜೆಟ್’ ಕನ್ನಡಿ ಒಳಗಿನ ಗಂಟು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಇದು ಅತ್ಯಂತ ನಿರಾಶದಾಯಕ ಬಜೆಟ್ , ಇದರಿಂದ ಏನು ಪ್ರಯೋಜನವಿಲ್ಲ.ಬಜೆಟ್ ಕನ್ನಡಿ ಒಳಗಿನ ಗಂಟು ಇದ್ದ ಹಾಗೆ. ಕೃಷಿ, ನೀರಾವರಿ, ಸಮಾಜ ಕಲ್ಯಾಣ ಇಲಾಖೆಗೆ ಯಾವುದೇ ಒತ್ತು ನೀಡಿಲ್ಲ ಎಂದರು.
ಭದ್ರಾ ಮೇಲ್ದಂಡೆ ಯೋಜನಗೆ ಹಣ ನೀಡುತ್ತೇವೆ ಎಂದಿದ್ದಾರೆ. ಆದರೆ ಇನ್ನೂ ನೋಟಿಫಿಕೇಶನ್ ಸಹ ಬಂದಿಲ್ಲ ನೋಟಿಫಿಕೇಶನ್ ಆಗಿಲ್ಲ ಅಂದರೆ 1 ರೂ ಖರ್ಚು ಮಾಡಲು ಆಗಲ್ಲ ಎಂದಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಯಾವುದೇ ಒತ್ತು ನೀಡಿಲ್ಲ, ಕರ್ನಾಟಕಕ್ಕೆ ಬಜೆಟ್ ನಲ್ಲಿ ಏನೂ ನೀಡಿಲ್ಲ ಎಂದಿದ್ದಾರೆ.