ಕೇಂದ್ರ ಬಜೆಟ್ ಅಧಿವೇಶನ: ರಾಷ್ಟ್ರಪತಿಗಳ ಭಾಷಣದ ಹೈಲೈಟ್ಸ್ ಇಲ್ಲಿದೆ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧಿವೇಶನ ಉದ್ದೇಶಿಸಿ ಮಾತನಾಡಿದ್ದಾರೆ.

ಭಾಷಣದ ಹೈಲೈಟ್ಸ್ ಇಲ್ಲಿದೆ..

ಸರ್ಕಾರ ನಾಗರಿಕರ ಸಬಲೀಕರಣಕ್ಕೆ ಜನ್-ಧನ್ ಆಧಾರ್- ಮೊಬೈಲ್ ಹಾಗೂ ಜೆಎಎಂ ಟ್ರಿನಿಟಿಯನ್ನು ಲಿಂಕ್ ಮಾಡಿದೆ. ಇದರ ಪರಿಣಾಮ ನೀವೇ ನೋಡಬಹುದು.

ಸಾಂಕ್ರಾಮಿಕ ಸಮಯದಲ್ಲಿ 44 ಕೋಟಿ ಬಡ ನಾಗರಿಕರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಿದ್ದು, ಇದರಿಂದ ಅವರು ಪ್ರಯೋಜನ ಪಡೆದಿದ್ದಾರೆ.

ಬೀದಿಬದಿ ವ್ಯಾಪಾರಿಗಳುಗೆ ಅನುಕೂಲವಾಗುವಂತೆ ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ, ಇಲ್ಲಿಯವರೆಗೆ 29 ಲಕ್ಷ ಬೀದಿಬದಿ ವ್ಯಾಪಾರಿಗಳಿಗೆ ಬೆಂಬಲ

ಕೋವಿಡ್ ಕಾರ್ಯಕರ್ತರಿಗೆ ಸದಾ ಕೃತಜ್ಞ. ಕೋವಿಡ್‌ಗೆ ಲಕ್ಷಾಂತರ ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಕರ್ತವ್ಯಕ್ಕೆ ಆದ್ಯತೆ ಕೊಟ್ಟು ಸಹಕರಿಸಿದ್ದು ಕೋವಿಡ್ ವಾರಿಯರ‍್ಸ್

ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತದ ಸಾಮರ್ಥ್ಯ ಲಸಿಕೆ ಕಾರ್ಯಕ್ರಮದಲ್ಲಿ ಸ್ಪಷ್ಟವಾಗಿ ಕಡಿದೆ. ಕಡಿಮೆ ಅವಧಿಯಲ್ಲಿ 150 ಕೋಟಿ ಡೋಸ್ ಲಸಿಕೆ ನೀಡಿ ದಾಖಲೆ ಮಾಡಿದ್ದೇವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!