ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದೆಲ್ಲೆಡೆ ಮಳೆಯ ಅಭಾವ ಉಂಟಾಗಿದ್ದು, ಬರಗಾಲ ನಿರ್ಮಾಣವಾಗಿದೆ. ಬರಗಾಲ ಪರಿಸ್ಥಿತಿ ಅಧ್ಯಯನ ನಡೆಸಲು ಕೇಂದ್ರ ಬರ ಅಧ್ಯಯನ ತಂಡಗಳು ಶೀಘ್ರದಲ್ಲೇ ರಾಜ್ಯಕ್ಕೆ ಆಗಮಿಸಲಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 195 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಿಸಿದ್ದು, ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ್ದೇವೆ. ಹೀಗಾಗಿ ಇದೇ ಅಕ್ಟೋಬರ್ 10 ರೊಳಗೆ ಕೇಂದ್ರ ಬರ ಅಧ್ಯಯನ ರಾಜ್ಯಕ್ಕೆ ತಂಡಗಳು ಆಗಮಿಸಲಿವೆ ಜೊತೆಗೆ ಅಧ್ಯಯನ ಕೈಗೊಳ್ಳಲಿವೆ ಎಂದು ಕೃಷಿ ಸಚಿವರು ತಿಳಿಸಿದರು.