ಹೊಸದಿಗಂತ ವರದಿ,ಶಿವಮೊಗ್ಗ:
ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ ಶೀಘ್ರ ನಿಷೇಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ 40 ಕ್ಕೂ ಹೆಚ್ಚು ಕಡೆ ಪಿಎಪ್ಐ ಸಂಘಟನೆ ಕಚೇರಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಕೆಲವು ಪಿಎಫ್ಐ ಮುಖಂಡರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.
ಪಿಎ್ಐ ವಿರುದ್ಧ ಸಮಗ್ರ ತನಿಖೆ ಮಾಡಿದ ಮೇಲೆ ಅವರ ದೇಶದ್ರೋಹಿ ಮತ್ತು ಕೇಂದ್ರ ಸರ್ಕಾರ ಉರುಳಿಸಲು ಮಾಡಿರುವ ಷಡ್ಯಂತ್ರ ಬಯಲು ಆಗಲಿದೆ. ಈಗಾಗಲೇ ಕೆಲ ಪ್ರಮುಖರು ಮತ್ತು ಸಂಘಟನೆಗಳ ಕಚೇರಿಗಳನ್ನು ನಾಶ ಮಾಡಲು ಹುನ್ನಾರ ನಡೆಸಿದ್ದು ಹೊರಬಂದಿದೆ. ಇದನ್ನು ಆಧರಿಸಿ ಪಿಎಫ್ಐ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.