ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಿಮ್ಹಾನ್ಸ್ನ 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಇದು ಬೆಂಗಳೂರು ನಗರದಾದ್ಯಂತ ಅಪಘಾತಕ್ಕೀಡಾದವರಿಗೆ ತುರ್ತು ಆರೈಕೆ ಮತ್ತು ಜೀವ ಉಳಿಸುವಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಕ್ಯಾಲಸನಹಳ್ಳಿಯಲ್ಲಿ 498 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ ಕೇಂದ್ರದ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದಿಂದ ಅನುಮೋದನೆ ನೀಡಿದೆ. ಸಂಸದ ತೇಜಸ್ವಿ ಸೂರ್ಯ ಈ ಯೋಜನೆಗೆ ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಿದ್ದರು. ಅದರಂತೆ ಅಂತಿಮವಾಗಿ ಕೆಂಪೇಗೌಡ ಜಯಂತಿ ಸಮಯದಲ್ಲಿ ಮಂಜೂರು ಮಾಡಲಾಗಿದೆ.