ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರಿ ನಿರ್ದೇಶನಾಲಯದ (ಇಡಿ) ಕಾರ್ಯಚಟುವಟಿಕೆಯಲ್ಲಿ ಕೇಂದ್ರ ಸರ್ಕಾರ ಅಥವಾ ಬಿಜೆಪಿಯ ಯಾವುದೇ ಹಸ್ತಕ್ಷೇಪ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸಂಸ್ಥೆಯನ್ನು ಬಿಜೆಪಿ ದುರುಪಯೋಗಪಡಿಸಿಕೊಳುತ್ತಿದೆ ಎಂದು ಕಾಂಗ್ರೆಸ್ನ ಆರೋಪ ಮಾಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿರುವ ಅವರು, ಅಕ್ರಮ ಹಣ ವರ್ಗಾವಣೆ ಶಂಕೆ ಇದ್ದಾಗ ಮಾತ್ರ ಇಡಿ ಕಾರ್ಯ ನಿರ್ವಹಿಸುತ್ತದೆ. ಪ್ರರಣಗಳನ್ನು ದಾಖಲೆ ಸಮೇತ ಪತ್ತೆಹಚ್ಚುತ್ತದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಬರುವ ಕಾನೂನು ಜಾರಿ (ಇಡಿ) ತನ್ನ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತಿದೆ ಎಂದು ಅವರು ಹೇಳಿದ್ದಾರೆ.