ಏಪ್ರಿಲ್‌ 1 ರಿಂದ ಗೋಧಿ ದಾಸ್ತಾನು ವಿವರ ದಾಖಲಿಸಿ: ರಾಜ್ಯ,ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್‌ 1ರಿಂದ ಕಡ್ಡಾಯವಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ವರ್ತಕರು ಗೋಧಿ ದಾಸ್ತಾನು ವಿವರ ದಾಖಲಿಸಬೇಕು ಎಂದು ಕೇಂದ್ರ ಆಹಾರ ಇಲಾಖೆ ಸೂಚನೆ ನೀಡಿದೆ.

ದೇಶದಲ್ಲಿ ಆಹಾರ ಭದ್ರತೆ ಕಲ್ಪಿಸಲು ಮತ್ತು ಅಪಪ್ರಚಾರದ ಊಹಾಪೋಹಗಳನ್ನು ತಡೆಗಟ್ಟುವ ಸಲುವಾಗಿ ಈ ಪಾರದರ್ಶಕ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪಾರಿಗಳು/ಸಗಟು ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು, ದೊಡ್ಡ ವರ್ತಕರು ಮತ್ತು ಸಂಸ್ಕರಣಾಕಾರರು ಏಪ್ರಿಲ್‌ 1ರಿಂದ ಗೋಧಿ ದಾಸ್ತಾನು ಘೋಷಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

ಕೇಂದ್ರ ಸರ್ಕಾರ ಎಲ್ಲಾ ವರ್ಗದ ಘಟಕಗಳಿಗೆ ಗೋಧಿ ದಾಸ್ತಾನು ಮಿತಿಯನ್ನು ಇದೇ ಮಾರ್ಚ್‌ 31ಕ್ಕೆ ಅಂತ್ಯಗೊಳಿಸಲಿದ್ದು, ನಂತರ ಹೊಸದಾಗಿ ಪೋರ್ಟಲ್‌ನಲ್ಲಿ ಗೋಧಿ ದಾಸ್ತಾನು ಎಷ್ಟಿದೆ ಎಂಬುದನ್ನು ಬಹಿರಂಗಪಡಿಸಬೇಕು. ಪೋರ್ಟಲ್‌ನಲ್ಲಿ ಇನ್ನೂ ನೋಂದಣಿ ಮಾಡಿಕೊಳ್ಳದ ಘಟಕಗಳು ತ್ವರಿತವಾಗಿ ನೋಂದಾಯಿಸಿಕೊಳ್ಳಬೇಕು ಮತ್ತು ಪ್ರತಿ ಶುಕ್ರವಾರ ಗೋಧಿ ದಾಸ್ತಾನು ಬಗ್ಗೆ ಮಾಹಿತಿ ದಾಖಲಿಸಬೇಕು ಎಂದು ಸೂಚಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!