ತಮಿಳುನಾಡು ನೀಟ್​ ವಿನಾಯಿತಿ ಮಸೂದೆ ತಿರಸ್ಕರಿಸಿದ ಕೇಂದ್ರ ಸರಕಾರ: ನಮ್ಮ ಹೋರಾಟ ಇನ್ನೂ ಮುಗಿದಿಲ್ಲ ಎಂದ ಸ್ಟಾಲಿನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್​​ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)ಗೆ ವಿನಾಯಿತಿ ಕೋರಿ ತಮಿಳುನಾಡು ಸರಕಾರ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕಾರ ಮಾಡಿದೆ .

ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಎಂ.ಕೆ ಸ್ಟಾಲಿನ್​ , ರಾಜ್ಯ ಸರ್ಕಾರ ನೀಡಿದ ವಿವರವಾದ ಸ್ಪಷ್ಟನೆ ಹೊರತಾಗಿ ಕೇಂದ್ರ ಸಚಿವರು, ಕೇಂದ್ರ ಸರ್ಕಾರ ಈ ಮಸೂದೆಯನ್ನು ತಿರಸ್ಕರಿಸಿದೆ. ಈ ನಿರ್ಧಾರವನ್ನು ಕಟುವಾಗಿ ಖಂಡಿಸಿರುವ ಸ್ಟಾಲಿನ್​ ಇದು ತಮಿಳುನಾಡು ಚುನಾಯಿತ ವಿಧಾನಸಭೆಗೆ ಅವಮಾನ ಎಂದಿದ್ದಾರೆ. ಅಲ್ಲದೇ ನೀಟ್​ ವಿರುದ್ಧ ಹೋರಾಟ ಇನ್ನೂ ಮುಗಿದಿಲ್ಲ. ಮುಂದಿನ ಕ್ರಮದ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಲಾಗುವುದು ಎಂದು ಇದೇ ವೇಳೆ ಸ್ಟಾಲಿನ್ ಕಾನೂನು ಹೋರಾಟದ ಎಚ್ಚರಿಕೆಯನ್ನೂ ರವಾನಿಸಿದ್ದಾರೆ.

ರಾಜ್ಯದ ಮುಂದಿನ ನಡೆ ನಿರ್ಧರಿಸಲು ಚರ್ಚಿಸಲು ಏಪ್ರಿಲ್​ 9ರಂದು ಎಲ್ಲಾ ಶಾಸಕಾಂಗ ಪಕ್ಷದ ನಾಯಕರ ಸಭೆ ಘೋಷಿಸಿದ್ದಾರೆ. ನ್ಯಾಯಸಮ್ಮತ ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಲಭ್ಯವಾಗಲು ತಮಿಳುನಾಡು ಸರ್ಕಾರ ಅಗತ್ಯವಾದ ಎಲ್ಲಾ ಕ್ರಮಕ್ಕೆ ಮುಂದಾಗುವ ಭರವಸೆಯನ್ನು ನೀಡಿದೆ.

ಈ ವಿಚಾರವನ್ನು ತಿಳಿಸುವ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರ ನಿವೃತ್ತ ನ್ಯಾ. ಎಕೆ ರಾಜನ್​ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಈ ಸಮಿತಿ ಶಿಫಾರಸಿನ ಆಧಾರದ ಮೇಲೆ ತಮಿಳುನಾಡು ವಿಧಾನಸಭೆಯಲ್ಲಿ 2021ರಲ್ಲಿ ನೀಟ್​ನಿಂದ ವಿನಾಯಿತಿ ನೀಡುವ ಯುಜಿ ವೈದ್ಯಕೀಯ ಪದವಿ ಕೋರ್ಸ್​ ಮಸೂದೆಯನ್ನು ಅವಿರೋಧವಾಗಿ ಅಂಗೀಕರಿಸಿತ್ತು. ದೀರ್ಘಕಾಲದ ವಿಳಂಬದ ಬಳಿಕ ರಾಜ್ಯಪಾಲರು ಕೂಡ ಇದಕ್ಕೆ ಸಹಿ ಹಾಕಿ ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!