ರೈತರ ಕನಸಿಗೆ ಕೇಂದ್ರದ ಬೆಂಬಲ: ಯಾದಗಿರಿಯಲ್ಲಿ ‘ಸೌಲಭ್ಯ ಕೇಂದ್ರ’ ಉದ್ಘಾಟಿಸಿದ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ವರದಿ ಯಾದಗಿರಿ: ಗುರಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಬಾರ್ಡ್ ಬ್ಯಾಂಕ್ ಸಹಯೋಗದಡಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಯಾದಗಿರಿ ಆಡಳಿತದಲ್ಲಿ ಸಣ್ಣ ಮತ್ತು ಹೊಸ ಜಿಲ್ಲೆಯಾದರೂ ಇದಕ್ಕೆ ತನಗನದೇಯಾದ ಇತಿಹಾಸವಿದೆ. ಆರ್ಥಿಕವಾಗಿ ಹಿಂದುಳಿದಿರುವುದರಿಂದ ಕೇಂದ್ರ ಸರ್ಕಾರ ನೀತಿ ಆಯೋಗದಡಿ ಮಹತ್ವಾಕಾಂಕ್ಷೆ ಜಿಲ್ಲೆ ಎಂದು ಘೋಷಿಸಿ, ಪ್ರತ್ಯೇಕ ಯೋಜನೆ ಜಾರಿಗೊಳಿಸುತ್ತಿದೆ ಎಂದರು.