ಬಾಗಲಕೋಟೆಯಲ್ಲಿ ಚೈತ್ರಾ ಕುಂದಾಪುರ ಕಾರು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಂಎಲ್‌ಎ ಟಿಕೆಟ್‌ ವಂಚನೆ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಖರೀದಿ ಮಾಡಿದ್ದ ಕಿಯಾ ಕಾರನ್ನು ಸಿಸಿಬಿ ಪೊಲೀಸರು ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಚೈತ್ರಾ ಬ್ಯಾಂಕ್‌ನಲ್ಲಿಟ್ಟಿದ್ದ ಹಣ, ಖರೀದಿ ಮಾಡಿದ್ದ ಚಿನ್ನಾಭರಣವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರಗೆ ಸೇರಿದ್ದ ಕಾರು ಮುಧೋಳದಲ್ಲಿ ಪತ್ತೆಯಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಿಸಿಬಿ ಪೊಲೀಸರಿಂದ ಚೈತ್ರಾ ಕುಂದಾಪುರ ಅವರ ಹೊಸ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಚೈತ್ರಾಳ ಸ್ನೇಹಿತ ಎಂದು ಹೇಳಲಾಗುವ ಕಿರಣ್‌ ಎನ್ನುವವರ ಬಳಿ ಈ ಕಾರು ಇತ್ತು. ಸೊಲ್ಲಾಪುರದಲ್ಲಿದ್ದ ಕಾರನ್ನು ಕಿರಣ್‌ ಮುಧೋಳಕ್ಕೆ ತಂದಿದ್ದನು. ಕಾರು ಡ್ರವೈವಿಂಗ್‌ ಸ್ಕೂಲ್‌ ನಡೆಸುತ್ತಿದ್ದ ಕಿರಣ್‌ಗೆ ಕೊಟ್ಟಿದ್ದು, ಅದನ್ನು ಈಗ ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ, ಯುವಕ ಕಿರಣ್‌ನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!