Monday, September 25, 2023

Latest Posts

ಆಸ್ಪತ್ರೆಯಿಂದ ಸಿಸಿಬಿ ಕಚೇರಿಗೆ ಚೈತ್ರಾ ಕುಂದಾಪುರ, ವಿಚಾರಣೆ ಪುನರಾರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಆರೋಪ ಪ್ರಕರಣದ ವಿಚಾರಣೆ ಇಂದು ಮುಂದುವರಿಯಲಿದೆ.

ನಿನ್ನೆಯೇ ವಿಕ್ಟೋರಿಯಾ ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್ ಆಗಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಇದೀಗ ಚಾಮರಾಜಪೇಟೆಯಲ್ಲಿ ಇರುವ ಸಿಸಿಬಿ ಕಚೇರಿಗೆ ಚೈತ್ರಾಳನ್ನು ಕರೆತಂದಿದ್ದು, ವಿಚಾರಣೆ ಮತ್ತೆ ಆರಂಭವಾಗಲಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಗೋವಿಂದ ಬಾಬುಗೆ ಚೈತ್ರಾ ಕುಂದಾಪುರ ಐದು ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!