Sunday, December 3, 2023

Latest Posts

ಚೈತ್ರಾ ಕುಂದಾಪುರಗೂ ವಿಹಿಂಪ, ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ: ಶರಣ್ ಪಂಪ್‌ವೆಲ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೈತ್ರಾ ಕುಂದಾಪುರ ಅವರಿಗೂ ವಿಹಿಂಪ, ಬಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಿಹಿಂಪ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದ್ದಾರೆ.

ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಯ ಕಾರ್ಯಕ್ರಮಗಳಿಗೆ ಚೈತ್ರಾ ಅವರು ಭಾಷಣ ಮಾಡಲು ಆಗಮಿಸುತ್ತಿದ್ದರು. ಆಕೆಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದ್ದು, ತಪ್ಪು ಎಸಗಿದ್ದರೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಲಿ ಎಂದು ಪ್ರತಿಕ್ರಿಯಿಸಿದರು.

ಚೈತ್ರಾ ಕುಂದಾಪುರ ಉಡುಪಿಯ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಹೇಳಿ 5 ಕೋಟಿ ರೂ. ಪಡೆದು ವಂಚನೆ ಮಾಡಿದ್ದಾರೆ. ಈ ಸಂಬಂಧ ದೂರು ದಾಖಲಾಗುತ್ತಿದ್ದಂತೆ ಚೈತ್ರಾ ಕುಂದಾಪುರ, ಶ್ರೀಕಾಂತ್‌, ಹಡಗಲಿಯ ಹಾಲಶ್ರೀ ಸ್ವಾಮೀಜಿ ಸೇರಿದಂತೆ 8 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!