ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದು, ಇಂದಿನಿಂದ ವಿಚಾರಣೆ ಆರಂಭವಾಗಲಿದೆ.
ನಿನ್ನೆ ಅವರನ್ನು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. 10 ದಿನಗಳ ಕಾಲ ಕಸ್ಟಡಿ ಪಡೆಯಲಾಗಿದ್ದು, ಸಿಸಿಬಿ ಎಸಿಪಿ ರೀನಾ ಸುವರ್ಣ ವಿಚಾರಣೆ ನಡೆಸಲಿದ್ದಾರೆ.
ಸಿಸಿಬಿ ಕಚೇರಿಗೆ ಆಗಮಿಸಿದ ಚೈತ್ರಾ, ಈ ಪ್ರಕರಣದಲ್ಲಿ ಸ್ವಾಮೀಜಿ ಕೂಡ ಇದ್ದಾರೆ, ಅವರ ಬಂಧನವಾದ್ರೆ ಎಲ್ಲ ದೊಡ್ಡ ದೊಡ್ಡ ವ್ಯಕ್ತಿಗಳ ಹೆಸರೂ ಹೊರಬರುತ್ತದೆ ಎಂದಿದ್ದಾರೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ನೀಡುವುದಾಗಿ ಹೇಳಿ ಐದು ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪವನ್ನು ಚೈತ್ರಾ ಎದುರಿಸುತ್ತಿದ್ದಾರೆ. ವಿಚಾರಣೆ ಬಳಿಕ ಇನ್ನಷ್ಟು ಮಾಹಿತಿ ಹೊರಬೀಳಲಿದೆ.