August 26, 2026
Wednesday, August 26, 2026
spot_img

ಚಾಮರಾಜನಗರದ ಆಕ್ಸಿಜನ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಾಮರಾಜನಗರದ ಆಕ್ಸಿಜನ್‌ ಕೊರತೆ ದುರಂತದಿಂದ ಪ್ರಾಣಬಿಟ್ಟ ರೋಗಿಗಳ ಕುಟುಂಬದ ಸದಸ್ಯರಿಗೆ ಸರ್ಕಾರ ಸರ್ಕಾರಿ ನೌಕರಿಯ ನೇಮಕಾತಿ ಪತ್ರ ನೀಡಿದೆ.

ಗುಂಡ್ಲುಪೇಟೆಯ ದೇವರಾಜ್‌ ಅರಸ್‌ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.

ಕೊರೋನಾ ಸೆಕೆಂಡ್‌ ವೇವ್‌ ಸಮಯದಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದಾಗಿ ರೋಗಿಗಳು ಕೊನೆಯುಸಿರೆಳೆದಿದ್ದರು. ಇವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅಂತೆಯೇ 25 ಮಂದಿಗೆ ಇಂದು ನೇಮಕಾತಿ ಪತ್ರವನ್ನು ವಿತರಣೆ ಮಾಡಲಾಗಿದೆ.

ಚಾಮರಾಜನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 25 ಮಂದಿಗೆ ಖಾಯಂ ನೌಕರಿಯನ್ನು ಸರ್ಕಾರ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !