ಚಾಮರಾಜಪೇಟೆ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ನಾಮಪತ್ರ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶಾಸಕ ಜಮೀರ್ ಅಹ್ಮದ್ ಖಾನ್ ನಾಮಪತ್ರ ಕೊನೆಗೂ ಚುನಾವಣಾಧಿಕಾರಿಗಳು ಅಂಗೀಕರಿಸಿದ್ದಾರೆ.

ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕೆಲ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂಬುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ನಾಮಪತ್ರ ತಿರಸ್ಕರಿಸುವಂತೆ ಹಲವರು ದೂರು ನೀಡಿದ್ದರು. ಈ ದೂರನ್ನು ತಿರಸ್ಕರಿಸಿರುವ ಚುನಾವಣಾಧಿಕಾರಿಗಳು, ಇದೀಗ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ನಾಮಪತ್ರವನ್ನು ಅಂಗೀಕರಿಸಿದ್ದಾರೆ.

ಜಮೀರ್ ಅಹ್ಮದ್ ಅಫಿಡವಿಟ್ ನಲ್ಲಿ ಕೆಲ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ. ಕ್ಯಾಸಿನೋದಲ್ಲಿ ಹೂಡಿಕೆ ಮಾಡಿರುವ ವಿವರವನ್ನೇ ಸಲ್ಲಿಸಿಲ್ಲ. ಸೋಮವಾರದಂದು ಎನ್‌ಐಎ ಹಾಗೂ ಇಡಿಗೆ ದೂರು ನೀಡಲಾಗುತ್ತದೆ ಎಂಬುದಾಗಿ ಶ್ರೀರಾಮಸೇನೆಯ ಮುಖಂಡ ಭಾಸ್ಕರನ್ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ತಕರಾರು ಅರ್ಜಿಯನ್ನು ಪರಿಶೀಲಿಸಿದ ಬಳಿಕ, ಚುನಾವಣಾಧಿಕಾರಿಗಳು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಬಳಿಕ ಚುನಾವಣಾಧಿಕಾರಿಗಳು ಚಾಮರಾಜಪೇಟೆ ಕೈ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ನಾಮಪತ್ರವನ್ನು ಅಂಗೀಕರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!