ನಾಳೆ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಆದೇಶ

ಹೊಸದಿಗಂತ ವರದಿ,ಮೈಸೂರು:

ಮಹಿಷ ದಸರಾ ಆಚರಣೆ ವಿವಾದ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ನಾಳೆ (ಅಕ್ಟೋಬರ್ 13 ) ನಿಷೇಧಾಜ್ಞೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಸಂಜೆಯವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಿ ಆದೇಶಿಸಲಾಗಿದೆ.

ಆದರೆ ಚಾಮುಂಡಿಬೆಟ್ಟದಲ್ಲಿ ಇರುವ ನಿವಾಸಿಗಳಿಗೆ, ತುರ್ತು ಸೇವೆಗಳಿಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಇದು ಅನ್ವಯಿಸುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!