ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ ಚಂದಾ ಕೊಚ್ಚರ್ ಹಾಗೂ ದೀಪಕ್ ಕೊಚ್ಚರ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಚಂದಾ ಅವರು ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಗೊಂಡಿದ್ದರೆ, ಪತಿ ದೀಪಕ್ ಆರ್ಥರ್ ರೋಡ್ನ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ತಮ್ಮ ಬಂಧನವನ್ನು ಪ್ರಶ್ನಿಸಿ ದಂಪತಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಪತಿ ದೀಪಕ್ ಕೊಚ್ಚರ್ ಬಂಧನ ಕಾನೂನು ಪ್ರಕಾರವಾಗಿಲ್ಲ. ಇಬ್ಬರನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯ ಆದೇಶಿಸಿತ್ತು.