ಬೆಂಗಳೂರು ಅಭಿವೃದ್ಧಿ ಸಚಿವರನ್ನು ಬದಲಾಯಿಸಿ: ಸಿಎಂಗೆ ಶಾಸಕ ಮುನಿರತ್ನ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ಬದಲಾವಣೆಗೆ ಆಗ್ರಹಿಸಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

16ನೇ ಬಜೆಟ್​ನಲ್ಲಿ ಬೆಂಗಳೂರು ನಗರಕ್ಕೆ ನೀಡುವ ಅನುದಾನ ಸಂಬಂಧ ಪತ್ರದಲ್ಲಿ ಉಲ್ಲೇಖಿಸಿರುವ ಮುನಿರತ್ನ, ಬೆಂಗಳೂರಿನ ಒಳಿತಿಗೆ ಯಾರನ್ನಾದರೂ ಉಸ್ತುವಾರಿ ಸಚಿವರನ್ನಾಗಿ ಮಾಡಿ ಎಂದು ಆಗ್ರಹಿಸಿದ್ದಾರೆ.

ಆಂಧ್ರ ಸಿಎಂ ಸಹಚರರು, ಗುತ್ತಿಗೆದಾರರು ನಮ್ಮ ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡಲು ಬಂದಿದ್ದಾರೆ. ಹೊರ ರಾಜ್ಯದ ಗುತ್ತಿಗೆದಾರರಿಗೆ ಶೇ 12ರಷ್ಟು ಮುಂಗಡ ಅನುದಾನ ನೀಡಿದ್ದಾರೆ. ಅನುದಾನ ಖರೀದಿ ಮಾಡಲು ಶೇ 12ರಷ್ಟು ಮುಂಗಡ ಹಣ ನೀಡಿದ್ದಾರೆ. ಕಾರ್ಯಾದೇಶ ಕೊಟ್ಟ ನಂತರ ಶೇ 8, ಅನುದಾನ ಬಿಡುಗಡೆ ಮಾಡಲು ಶೇ 15 ರಷ್ಟು ಸೇರಿ ಒಟ್ಟಾರೆ‌ ಶೇ 35 ಕ್ಕೆ ವ್ಯವಹಾರ ಕುದುರಿಸಿ ಮುಂಗಡ ಹಣ ನೀಡಿದ್ದಾರೆ. ಈಗಾಗಲೇ ಫೈವ್ ಸ್ಟಾರ್ ಹೋಟೆಲ್​ಗಳಲ್ಲಿ ವ್ಯವಹಾರ ಕುದುರಿಸಿದ್ದಾರೆ ಎಂದು ಬೆಂಗಳೂರು ಅಭಿವೃದ್ಧಿ ಇಲಾಖೆ ಸಚಿವರ ವಿರುದ್ಧ ಮುನಿರತ್ನ ಆರೋಪ ಮಾಡಿದ್ದಾರೆ.

ಅನುದಾನ ನೀಡುವ ವೇಳೆ ಬೆಂಗಳೂರು ನಗರದ ಶಾಸಕರ ಸಭೆ ಮಾಡಿ. ಬಳಿಕ ನೇರವಾಗಿ ತಾವೇ ಕ್ಷೇತ್ರಗಳಿಗೆ ಅನುದಾನ ಘೋಷಣೆ ಮಾಡಬೇಕು. ಬೆಂಗಳೂರು ನಗರದ ಉಸ್ತುವಾರಿ ಸಚಿವರಾಗಿ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್ ಅವರನ್ನು ಮರು ನೇಮಕ ಮಾಡಬಹುದು ಎಂದು ಮುನಿರತ್ನ ಸಿಎಂಗೆ ಸಲಹೆ ನೀಡಿದ್ದಾರೆ.

ನಾನು ಈ ಪತ್ರ ಬರೆದಿರುವುದಕ್ಕೆ ನನ್ನ ಮೇಲೆ ಮತ್ತೆ ದಲಿತ ದೌರ್ಜನ್ಯ, ಅತ್ಯಾಚಾರ, ಪೋಕ್ಸೋ ಸೇರಿ ಇನ್ನೂ ಒಂದಷ್ಟು ಸುಳ್ಳು ಆರೋಪಗಳ ಕೇಸ್ ದಾಖಲಾಗಬಹುದು ಎಂದೂ ಮುನಿರತ್ನ ಹೇಳಿದ್ದಾರೆ. ಈ ವಿಚಾರವನ್ನು ಸಿಎಂ ಸಿದ್ದರಾಮಯ್ಯಗೆ ಬರೆದ ಪತ್ರದಲ್ಲಿಯೂ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!