ಬದಲಾಗುತ್ತಿದೆ ಹವಾಮಾನ: ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಮುಸಲಧಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಪ್ರಭಲವಾಗಿದೆ.
ಬಿಸಿಲು, ಮೋಡದ ವಾತಾವರಣವಿದ್ದರೂ ಸುರಿಯುವ ಮಳೆಯ ತೀವ್ರತೆ ಹೆಚ್ಚಾಗಿದೆ.
ಮುನ್ಸೂಚನೆಗಳ‌ ಪ್ರಕಾರ ಇದೇ ವಾತಾವರಣ ಜು. 5ರ ತನಕ ಮುಂದುವರಿಲಿದ್ದು, ಬಳಿಕ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದೆ.
ಇನ್ನು ರಾಜ್ಯದ ಒಳನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ, ಭಾರೀ ಮಳೆಯಾಗುವ ಲಕ್ಷಣಗಳು ಕಾಣಿಸಿಲ್ಲ. ಅಲ್ಲಲ್ಲಿ ಸಾಮಾನ್ಯ ಮಳೆಗೆ ಮುಂಗಾರು ಸೀಮಿತವಾಗಲಿದೆ. ಜು.03 ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು, ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯಾಗಲಿದೆ.
ಕೊಡಗು ಹೆಚ್ಚಿನ ಭಾಗಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಅಲ್ಲಲ್ಲಿ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೆಳಗಾವಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!