ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋದಿ ಸರ್ನೇಮ್ ಇರುವ ಎಲ್ಲರು ಕಳ್ಳರು ಎಂಬ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಧೋಷಿ ಎಂದು ಸೂರತ್ ಕೋರ್ಟ್ ತೀರ್ಪ ಬೆನ್ನಲ್ಲೇ ಸಂಸತ್ತಿನಲ್ಲಿ ಕಾಂಗ್ರೆಸ್ ಭಾರಿ ಕೋಲಾಹಲ ಎಬ್ಬಿಸಿದೆ. ಹೀಗಾಗಿ ಅಧಿವೇಶನ ಮುಂದೂಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿರಿಯ ಸಚಿವರು ಸ್ಪೀಕರ್ ಓಂ ಬಿರ್ಲಾ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಹಿರಿಯ ಸಚಿವರಾದ ರಾಜನಾಥ್ ಸಿಂಗ್, ಪ್ರಹ್ಲಾದ್ ಜೋಶಿ ಕಿರಣ್ ರಿಜಿಜು ಮುಂತಾದವರು ಜೊತೆಗಿದ್ದರು.
ರಾಹುಲ್ ಗಾಂಧಿ ಸಂಸದ ಸ್ಥಾನ ಅರ್ಹತೆ ಕುರಿತು ತೀವ್ರ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಸ್ಪೀಕರ್ ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣಾಗಿದೆ. ಹಲವು ಬಿಜೆಪಿ ನಾಯಕರು ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ ಮಾಡಬೇಕು ಎಂದು ಆಗ್ರಹಿಸಿದ್ದಾರೆ.