ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಿದ್ಧ ಚಾರ್ಧಾಮ್ ಯಾತ್ರೆಯಲ್ಲಿ ಮೇ 3ರಿಂದ ಇದುವರೆಗೆ 91 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದರಲ್ಲಿ ಬಹುಪಾಲು ಜನರು ಯಾತ್ರೆ ಸಂದರ್ಭದಲ್ಲಿ ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ.
ಕೊರೋನಾ ಹಾವಳಿಯ ಎರಡು ವರ್ಷಗಳ ನಂತರ ಯಾತ್ರಿಕರ ಸಂಖ್ಯೆ ಹೆಚ್ಚಾಗಿದೆ. ಇಲ್ಲಿಯವರೆಗೆ 11.50 ಲಕ್ಷ ಜನರು ಚಾರ್ಧಾಮ್ಗೆ ಭೇಟಿ ನೀಡಿದ್ದಾರೆ. ಇದರಲ್ಲಿ 91 ಮಂದಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಈ ಪೈಕಿ ಕೇದಾರನಾಥದಲ್ಲಿ 44, ಬದರಿನಾಥದಲ್ಲಿ 17, ಯಮುನೋತ್ರಿಯಲ್ಲಿ 24 ಮತ್ತು ಗಂಗೋತ್ರಿಯಲ್ಲಿ 6 ಜನ ಭಕ್ತರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೃತರಲ್ಲಿ ಹೆಚ್ಚಿನ ಯಾತ್ರಿಕರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾಲ್ಕು ಧಾಮ್ಗಳಲ್ಲಿ 169ಕ್ಕೂ ಹೆಚ್ಚು ವೈದ್ಯರನ್ನು ನಿಯೋಜಿಸಲಾಗಿದೆ. ಯಾತ್ರೆ ಬರುವವರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಲಾಗಿದೆ ಎಂದು ಉತ್ತರಾಖಂಡದ ಆರೋಗ್ಯ ಇಲಾಖೆಯ ಮಹಾ ನಿರ್ದೇಶಕಿ ಶೈಲಜಾ ಭಟ್ ತಿಳಿಸಿದ್ದಾರೆ.