Friday, June 2, 2023

Latest Posts

ಜಾರಿ ಬಿದ್ದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾವು: ಹಾಸನ ಡಿಸಿ ಮಾಹಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರವಣಬೆಳಗೊಳ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಡಿಸಿ ಎಂ.ಎಸ್.ಅರ್ಚನಾ (M.S.Archana) ಮಾಹಿತಿ ನೀಡಿದ್ದಾರೆ.

ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಬೆಳಗ್ಗೆ ನಿತ್ಯಕರ್ಮಕ್ಕೆ ಎದ್ದಾಗ ನಿಯಂತ್ರಣ ತಪ್ಪಿ ಕಾಲು ಜಾರಿ ಬಿದ್ದು, ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ತೀವ್ರ ಗಾಯಗಳಿಂದ ಬಳಲಿದ್ದ ಶ್ರೀಗಳನ್ನು ಮಠದ ಸಿಬ್ಬಂದಿಗಳು ಆಸ್ಪತ್ರೆಗೆ ಸಾಗಿಸಿದ್ದರು. ಆದ್ರೆ ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಶ್ರೀಗಳು ಮೃತಪಟ್ಟಿದ್ದಾರೆ.

ಶ್ರವಣಬೆಳಗೊಳದ (Shravanabelagola) ಚಂದ್ರಗಿರಿ ಬೆಟ್ಟದ (Chandragiri Betta) ತಪ್ಪಲಿನಲ್ಲಿ ಸಂಜೆ ಆರು ಗಂಟೆಯೊಳಗಾಗಿ ಶ್ರೀಗಳ ಅಂತ್ಯಸಂಸ್ಕಾರ (Funeral) ನೆರವೇರಲಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!