ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೋರ್ವರಿಗೆ ಬಹುಕೋಟಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾಳನ್ನು ಮಂಗಳವಾರ ಕೋಟ ಪೋಲಿಸರು ವಿಚಾರಣೆಗೆಂದು ಠಾಣೆಗೆ ಕರೆ ತಂದಿದ್ದಾರೆ.
ಸುಧೀನ್ ಪೂಜಾರಿ ದಾಖಲಿಸಿದ್ದ 5 ಲಕ್ಷ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಬ್ರಹ್ಮಾವರ ವೃತ್ತನಿರೀಕ್ಷಕ ಪರಪ್ಪನ ಅಗ್ರಹಾರದಿಂದ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ.
ಎರಡು ದಿನ ಪೊಲೀಸ್ ಕಸ್ಟಡಿಗೆ ಕೇಳಿದ್ದ ಪೊಲೀಸರು, ಒಂದೇ ದಿನದಲ್ಲಿ ವಿಚಾರಣೆ ಪೂರ್ಣಗೊಂಡ ಹಿನ್ನಲೆಯಲ್ಲಿ ಬ್ರಹ್ಮಾವರದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿಪೀಠದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮುಂದೆ ಹಾಜರುಪಡಿಸಿದ್ದಾರೆ.
ಸದ್ಯ ಮಂಗಳೂರು ಜೈಲಿಗೆ ಚೈತ್ರಾಳನ್ನು ಪೋಲಿಸ್ ಬಂದೋಬಸ್ತ್ ನಲ್ಲಿ ಕಳುಹಿಸಲಾಗಿದ್ದು, ಬುಧವಾರ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಚೈತ್ರಾಳನ್ನು ಕಳುಹಿಸಿ ಕೊಡಲಾಗುತ್ತದೆ.