ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೆಕ್ ಬೌನ್ಸ್ ಪ್ರಕರಣದಲ್ಲಿ ಬಂಧನವಾಗಿದ್ದ ಸ್ಯಾಂಡಲ್ ವುಡ್ ನಿರ್ದೇಶಕ, ನಟ ಗುರುಪ್ರಸಾದ್ ಅವರರಿಗೆ ಬೆಂಗಳೂರಿನ 21 ನೇ ಎಸಿಎಂಎಂ ಕೋರ್ಟ್ ಜಾಮೀನು ನೀಡಿ ಆದೇಶಿಸಿದೆ.
ಕೋರ್ಟ್ ಫೆ.7 ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ಶ್ರೀನಿವಾಸ್ ಎಂಬುವವರಿಗೆ ಹಣ ಕೊಡೋ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಕೋರ್ಟ್ ಗೆ ಹಾಜರಾಗದ ಹಿನ್ನಲೆ ಎನ್ಬಿಡಬ್ಲೂ ಜಾರಿಯಾಗಿತ್ತು. ನಂತರ ಗಿರಿ ನಗರ ಪೊಲೀಸರು ಗುರುಪ್ರಸಾದ್ ಅವರನ್ನು ಅರೆಸ್ಟ್ ಮಾಡಿದ್ದರು. ವಂಚನೆ ಹಾಗು ಮೋಸ ಮಾಡಿರೋ ಆರೋಪ ಹಿನ್ನಲೆ ಕೇಸ್ ದಾಖಲಾಗಿತ್ತು. ಬಳಿಕ ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಿದ್ದರು.