ಹೊಸದಿಗಂತ ಡಿಜಿಟಲ್ ಡೆಸ್ಕ್ :
ಚೆಕ್ ಬೌನ್ಸ್ ಕೇಸ್ ಪ್ರಕರಣದಲ್ಲಿ ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2011ರಲ್ಲಿ ಆಕಾಶ್ ಆಡಿಯೋ ಕಂಪನಿಯ ಎಂ.ಡಿಯಾಗಿದ್ದಂತ ಮಧು ಬಂಗಾರಪ್ಪ ಅವರು, ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂ ಬಾಕಿ ಪಾವತಿಗಾಗಿ ಚೆಕ್ ನೀಡಿದ್ದರು. ಈ ಚೆಕ್ ಬೌನ್ಸ್ ಆಗಿತ್ತು. ಹೀಗಾಗಿ ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆಯಿಂದ ಮಧು ಬಂಗಾರಪ್ಪ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗಿತ್ತು.
ಮಧು ಬಂಗಾರಪ್ಪ ಅವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಮಧು ಬಂಗಾರಪ್ಪ ಅವರಿಗೆ ಜಾಮೀನು ಮಂಜೂರು ಮಾಡಿದೆ.