SHOCKING| ತಿರುಮಲ ಮೆಟ್ಟಿಲು ದಾರಿಯಲ್ಲಿ ಬಾಲಕಿ ಮೇಲೆ ಚಿರತೆ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಿರತೆ ದಾಳಿಗೆ ಮಗುವೊಂದು ಸಾವನ್ನಪ್ಪಿರುವ ಘಟನೆ ತಿರುಮಲದಲ್ಲಿ ನಡೆದಿದೆ. ಮೆಟ್ಟಿಲು ದಾರಿಯಲ್ಲಿ ಬಾಲಕಿ ಮೇಲೆ ಚಿರತೆ ದಾಳಿ ನಡೆಸಿ, ಕೊಂದು ಹಾಕಿರುವ ಘಟನೆ ಭಕ್ತರಲ್ಲಿ ಆತಂಕ ಮೂಡಿಸಿದೆ. ತೀವ್ರ ಗಾಯಗಳಿಂದ ಮಗುವಿನ ಮೃತದೇಹ ಪತ್ತೆಯಾಗಿದೆ.

ನಿನ್ನೆ (ಶುಕ್ರವಾರ) ರಾತ್ರಿ ಅಲಿಪಿರಿ ಮೆಟ್ಟಿಲಿಂದ 6 ವರ್ಷದ ಬಾಲಕಿ ಲಕ್ಷಿತಾ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕಿಯನ್ನು ಚಿರತೆ ಎಳೆದೊಯ್ದು ಕೊಂದು ಹಾಕಿದೆ. ಬೆಳಗ್ಗೆ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಗುವಿನ ಶವ ಪತ್ತೆಯಾಗಿದೆ.

ಈ ಹಿಂದೆ ಇದೇ ಪ್ರದೇಶದಲ್ಲಿ ಬಾಲಕನ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಅದೃಷ್ಟವಶಾತ್‌ ಬಾಲಕ ಬದುಕುಳಿದ. ಈ ಹಿಂದೆ ಬಾಲಕನ ಮೇಲೆ ದಾಳಿ ಮಾಡಿದ್ದ ಅದೇ ಪ್ರದೇಶದಲ್ಲಿ ಚಿರತೆ ಮಗುವಿನ ಮೇಲೆ ದಾಳಿ ಮಾಡಿದೆ. ಮಗುವಿನ ದೇಹಕ್ಕೆ ತೀವ್ರ ಪೆಟ್ಟಾಗಿತ್ತು. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪದೇ ಪದೇ ನಡಿಗೆದಾರಿಯಲ್ಲಿ ಚಿರತೆಯ ಹಾವಳಿಯಿಂದ ಭಕ್ತರು ಭಯಭೀತರಾಗಿದ್ದು, ಟಿಟಿಡಿ ಆಡಳಿತ ಮಂಡಳಿ ಇದರತ್ತ ಗಮನ ಹರಿಸಬೇಕೆಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!