ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ.
ಸಹಾಯಕ ಲೈನ್ಮ್ಯಾನ್ ಸಂತೋಷ್ (26) ಮೃತ ರ್ದುದೈವಿ.
ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎಂದು ಮೃತ ಸಂತೋಷ್ ಪೋಷಕರು, ಸ್ನೇಹಿತರು ಆರೋಪಿಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.