ಹೊಸದಿಗಂತ ಡಿಜಿಟಲ್ ಡೆಸ್ಕ್
ಹೊಸದಿಲ್ಲಿ: ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಗೆ ಬರುವಂತೆ ಪಕ್ಷದ ವರಿಷ್ಠರು ನನಗೆ ಆಹ್ವಾನ ನೀಡಿಲ್ಲ.
ವಿವಿಧ ಯೋಜನೆಗಳ ಚರ್ಚೆಗೆಂದು ನಾನು ಇಲ್ಲಿಗೆ ಬಂದಿರುವ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಭಾ.ಜ.ಪಾ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂದರ್ಭದಲ್ಲಿ ಪಕ್ಷ , ಸಂಘಟನೆ ಕುರಿತಂತೆ ಚರ್ಚಿಸಲಾಗುವುದು ಎಂದರು.
ವರಿಷ್ಠರನ್ನು ಭೇಟಿಯಾಗಲು ಸಮಯ ಇನ್ನೂ ನಿಗದಿಯಾಗಿಲ್ಲ. ಹೈಕಮಾಂಡ್ ಜೊತೆ ಚರ್ಚೆಗೆ ಕುಳಿತ ಸಂದರ್ಭದಲ್ಲಿ ಸಂಪುಟ ಪುನರ್ ರಚನೆಯೊ, ವಿಸ್ತರಣೆಯೋ ಎನ್ನುವುದು ತಿಳಿಯುತ್ತದೆ ಎಂದು ಹೇಳಿದರು.