“ಸಚಿವ ಸಂಪುಟ ವಿಸ್ತರಣೆ ಮಾತುಕತೆಗೆ ಹೈಕಮಾಂಡ್ ಕರೆದಿಲ್ಲ”

 

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಸಚಿವ ಸಂಪುಟ ವಿಸ್ತರಣೆ ಕುರಿತು ಮಾತುಕತೆಗೆ ಬರುವಂತೆ ಪಕ್ಷದ ವರಿಷ್ಠರು ನನಗೆ ಆಹ್ವಾನ ನೀಡಿಲ್ಲ.
ವಿವಿಧ ಯೋಜನೆಗಳ ಚರ್ಚೆಗೆಂದು ನಾನು ಇಲ್ಲಿಗೆ ಬಂದಿರುವ ಈ ಸಂದರ್ಭವನ್ನು ಉಪಯೋಗಿಸಿಕೊಂಡು ಭಾ.ಜ.ಪಾ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂದರ್ಭದಲ್ಲಿ ಪಕ್ಷ , ಸಂಘಟನೆ ಕುರಿತಂತೆ ಚರ್ಚಿಸಲಾಗುವುದು ಎಂದರು.

ವರಿಷ್ಠರನ್ನು ಭೇಟಿಯಾಗಲು ಸಮಯ ಇನ್ನೂ ನಿಗದಿಯಾಗಿಲ್ಲ. ಹೈಕಮಾಂಡ್ ಜೊತೆ ಚರ್ಚೆಗೆ ಕುಳಿತ ಸಂದರ್ಭದಲ್ಲಿ ಸಂಪುಟ ಪುನರ್ ರಚನೆಯೊ, ವಿಸ್ತರಣೆಯೋ ಎನ್ನುವುದು ತಿಳಿಯುತ್ತದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!