ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಸಿದ್ದರಾಮಯ್ಯನವರ ಕಾರ್ಯವೈಖರಿಯನ್ನು ಲೇವಡಿ ಮಾಡಿದ್ದಾರೆ, ಸಿದ್ದರಾಮಯ್ಯ ಆಡೋದೊಂದು ಮಾಡೋದೊಂದು, ತಮ್ಮ ಭಾಷಣಗಳಲ್ಲಿ ಬಸವಣ್ಣನವರ ವಚನಗಳು ಆದರೆ ಪ್ರತಿಭಟನೆ ನಡೆಸುವ ಬಸವಣ್ಣನ ಅನುಯಾಯಿಗಳ ಮೇಲೆ ಲಾಠಿಚಾರ್ಜ್ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ಯಾವ ಮುಖ್ಯಮಂತ್ರಿಯೂ ಲಿಂಗಾಯತರ ಮೇಲೆ ಇಂತಹ ಹೇಯ ದಾಳಿ ನಡೆಸಿಲ್ಲ ಎಂದು ಅಶೋಕ ಹೇಳಿದರು.
1975 ರಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದಾಗ ಉಂಟಾದ ಸ್ಥಿತಿ ಈಗ ರಾಜ್ಯದಲ್ಲಿ ನಿರ್ಮಾಣವಾಗಿದೆ, ತಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಲಿಂಗಾಯತ ಜನರ ನಡುವೆ ಕಲಹವಿತ್ತು, ಅದರೆ ನಾವು ಅವರ ಮನವಿಗೆ ಸ್ಪಂದಿಸಿ ಬೇಡಿಕೆ ಈಡೇರಿಸುವ ಕೆಲಸ ಮಾಡಿದ್ದೆವು ಎಂದು ಹೇಳಿದ್ದಾರೆ.