ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ .

ಇದಕ್ಕೂ ಮುನ್ನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ಸಿದ್ದರಾಮಯ್ಯ , ಮಾಧ್ಯಮದವರೊಂದಿಗೆ ಮಾತನಾ, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!